ಬೆಳ್ತಂಗಡಿ ರಿಕ್ಷಾ ಅಪಘಾತ ಮಹಿಳೆ ಸಾವು: ಮೂವರಿಗೆ ಗಾಯ

ಬೆಳ್ತಂಗಡಿ: ಬೆಳ್ತಂಗಡಿ ಸೇತುವೆ ಸಮೀಪ ಇಂದು ಬೆಳಗ್ಗೆ ರಿಕ್ಷಾ ಅಪಘಾತ ನಡೆದಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ‌.

ಮಾ. 31ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಉಜಿರೆಯಿಂದ ಬೆಳ್ತಂಗಡಿಗೆ ಆಗಮಿಸುತ್ತಿದ್ದ ರಿಕ್ಷಾ, ಬೆಳ್ತಂಗಡಿ ಸೋಮಾವತಿ ಸೇತುವೆ ಸಮೀಪ , ಕಾರು ಶೋ ರೂಮ್ ಬಳಿ ರಸ್ತೆಯ ಎಡಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರಯಾಣಿಕರಾದ ಲಕ್ಷ್ಮಿ, ಲೀಲಾ, ಯತೀಶ್ ಹಾಗೂ ಚಾಲಕ ಬೇಬಿ ಗೌಡ ಗಾಯಗೊಂಡಿದ್ದರು. ಗಾಯಗೊಂಡಿದ್ದವರ ಪೈಕಿ ಲೀಲಾ, ಯತೀಶ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಪ್ರಯಾಣಿಕರಾದ ಒಡಿಲ್ನಾಳ ಗ್ರಾಮದ ಲಕ್ಷ್ಮಿ ಯಾನೆ ದುಗ್ಗಮ್ಮ(65) ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

error: Content is protected !!