ಯುಪಿ ಸಂಡೇ ಲಾಕ್ ಡೌನ್: 2ನೇ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ ಬೀಳುತ್ತೆ 10 ಸಾವಿರ ದಂಡ: ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಆದೇಶ

ದೆಹಲಿ‌: ಕೊರೊನಾ ಮಹಾಮಾರಿ ಅವಾಂತರ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಉತ್ತರ ಪ್ರದೇಶದಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್​ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈ ಮಹತ್ವದ ಆದೇಶ ಹೊರಡಿಸಿದ್ದು, ಎರಡನೇ ಸಲ ಮಾಸ್ಕ್​ ನಿಯಮ ಉಲ್ಲಂಘನೆ ಮಾಡಿದ್ದೆ ಆದಲ್ಲಿ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಲಾಗಿದೆ.ನಿನ್ನೆ ಒಂದೇ ದಿನ ಉತ್ತರ ಪ್ರದೇಶದಲ್ಲಿ 22,439 ಹೊಸ ಕೋವಿಡ್​ ಸೋಂಕಿತ ಪ್ರಕರಣ ದಾಖಲಾಗಿದ್ದು, 104 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈಗಾಗಲೇ ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ರಾತ್ರಿ 8ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ.ಲಖನೌ, ಪ್ರಯಾಗರಾಜ್​, ವಾರಣಾಸಿ, ಕಾನ್ಪುರ್​ ನಗರ,ಗೌತಮ್​ ಬುದ್ಧ ನಗರ, ಗಾಜಿಯಾಬಾದ್​, ಮಿರತ್​, ಗೋರಖ್​ಪುರ್​​​ದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರಮುಖವಾಗಿ ಲಖನೌ, ವಾರಾಣಸಿ, ಪ್ರಯಾಗ್​ರಾಜ್​​ದಲ್ಲಿ ಪ್ರತಿದಿನ ಸಾವಿರಾರು ಕೋವಿಡ್​ ಪ್ರಕರಣ ದಾಖಲಾಗುತ್ತಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈಗಾಗಲೇ ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

error: Content is protected !!