ಬರಾಯ ಗೋಪಾಲಕೃಷ್ಣ ದೇವಸ್ಥಾನ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಅಳದಂಗಡಿ ಸಮೀಪದ ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೂಳಬೆಟ್ಟು ಇಲ್ಲಿನ ವಾರ್ಷಿಕ ಜಾತ್ರೆಯ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಎರಡನೇ ವರ್ಷದ ಸ್ವಚ್ಛತಾ ಕಾರ್ಯಕ್ರಮ ಆದಿತ್ಯವಾರ ಅಳದಂಗಡಿ-ಸೂಳಬೆಟ್ಟು ರಸ್ತೆಯ ನಿನ್ನಿಕಲ್ಲು ಎಂಬಲ್ಲಿಂದ ಪ್ರಾರಂಭಿಸಲಾಯಿತು.

ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯಾ ಹರಿಪ್ರಸಾದ್ ಕಸ ಹೆಕ್ಕುವುದರ ಮೂಲಕ ಸ್ವಚ್ಛತೆಗೆ ಚಾಲನೆ ನೀಡಿದರು. ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಆಚಾರ್ಯ, ಸದಸ್ಯ ಪ್ರವೀಣ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವಲಯ‌ ಮೇಲ್ವಿಚಾರಕಿ ಮಲ್ಲಿಕಾ, ಪಿಲ್ಯ ಒಕ್ಕೂಟ ಸೇವಾ ಪ್ರತಿನಿಧಿ ಹರಿಣಾಕ್ಷಿ ಲತೀಶ್, ಅಧ್ಯಕ್ಷ ಕೃಷ್ಣರಾಜ ಭಟ್, ಸ್ವಚ್ಛತಾ ಸೇನಾನಿ ನಾರಾಯಣ ಸಾಲಿಯಾನ್, ಸೂಳಬೆಟ್ಟಿನ ಶ್ರೀ ರೌದ್ರಭೈರವಿ ಹೋರಾಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ , ಸ್ರ್ತೀ ಶಕ್ತಿ ಕೇಂದ್ರ, ಫಲ್ಗುಣಿ ನವೋದಯ ಗುಂಪು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಾಲು ಉತ್ಪಾದಕರ ಸಹಕಾರಿ ಸಂಘ, ಅಂಗನವಾಡಿ ಬಾಲವಿಕಾಸ ಸಮಿತಿ, ವಿಪತ್ತು ನಿರ್ವಹಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಳದಂಗಡಿ ಗ್ರಾ.ಪಂ.ಆಡಳಿತ ಮಂಡಳಿ ಮೂರು ಹುಲ್ಲು ತೆಗೆಯುವ ಯಂತ್ರ ಹಾಗೂ ಕಸ ಸಾಗಿಸುವ ವಾಹನದ ವ್ಯವಸ್ಥೆಯನ್ನು ಕಲ್ಪಿಸಿತ್ತು.

error: Content is protected !!