ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಹತ್ವದ ಆದೇಶ ಹೊರಡಿಸಿದ ಸಿಎಂ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​ ನಿಯಂತ್ರಣಕ್ಕಾಗಿ ಮತ್ತೆ 14 ದಿನಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿಎಸ್​ವೈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್​ವೈ, ಜೂನ್​​ 7ರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ವಿಸ್ತರಣೆಯಾಗಲಿದೆ ಎಂದರು. ಹೀಗಾಗಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಮುಂದಿನ 14 ದಿನಗಳ ಕಾಲ ಈಗಾಗಲೇ ಜಾರಿಗೊಂಡಿರುವ ಲಾಕ್​ಡೌನ್​ ಮುಂದುವರೆಯಲಿದೆ.

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಮಾರ್ಗಸೂಚಿ ನಿಯಮ ಪಾಲನೆ ಕಡ್ಡಾಯವಾಗಿದ್ದು, ಬೆಳಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಅನಗತ್ಯವಾಗಿ ಓಡಾಡುವುದು ಕಂಡು ಬರುತ್ತಿರುವ ಕಾರಣ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್​ವೈ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಬ್ಲಾಕ್​ ಫಂಗಸ್​ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು.

error: Content is protected !!