ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಬೆಳ್ತಂಗಡಿ: ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ಸ್ಟುಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ, ಪ್ರಸಾದ್( 23ವ) ಎಂಬ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಮೇ 20ರಂದು ಸುಲ್ಕೇರಿಯ ಅಣ್ಣಿ ಪೂಜಾರಿ ಎಂಬವರ ಪುತ್ರ ರಾದ ಇವರು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತಮ್ಮ ಮನೆಯ ಸಮೀಪ ಕಾಂಕ್ರಿಟ್ ರಸ್ತೆಯಲ್ಲಿ ಹೋಗುತ್ತಿರುವ ಸಂದರ್ಭ ಬೈಕ್ ಸ್ಕಿಡ್ ಆಗಿ ಬಿದ್ದು ಈ ದುರ್ಘಟನೆ ನಡೆದಿದೆ.

error: Content is protected !!