ಭಾರೀ ಮಳೆಗೆ ಬಂಡೆಕಲ್ಲು ಸಹಿತ ಗುಡ್ಡ ಕುಸಿತ ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ: ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಪಕ್ಕದ ಬಂಡೆಕಲ್ಲು ಸಹಿತ ಗುಡ್ಡವೊಂದು ಕುಸಿದು ಬಿದ್ದ ಘಟನೆ ತಾಲೂಕಿನ ಲಾಯಿಲ ಗ್ರಾಮದ ಸವಣಾಲು ರಸ್ತೆಯಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಹೆರಾಜೆ ಸಮೀಪದ ಹಸನಬ್ಬ ಎಂಬವರ ಮನೆಯ ಪಕ್ಕದ ಗುಡ್ಡ ಜೂ 16 ರಂದು ರಾತ್ರಿ ಕುಸಿದಿದ್ದು ದೊಡ್ಡ ದೊಡ್ಡ ಕಲ್ಲುಗಳು ಮನೆಯ ಗೋಡೆಯ‌ ಪಕ್ಕದಲ್ಲೇ ಉರುಳಿ ಬಿದ್ದಿದೆ ಅದರೆ ಮನೆಯ ಗೋಡೆಗೆ ಸಣ್ಣಪುಟ್ಟ ಹಾನಿಯಾಗಿದ್ದಲ್ಲದೆ ದೊಡ್ಡ ಅನಾಹುತ ತಪ್ಪಿದೆ.

ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಜೆ, ಗ್ರಾಮ ಲೆಕ್ಕಾಧಿಕಾರಿ ರನಿತಾ, ಲಾಯಿಲ ಗ್ರಾ.ಪಂ ಅಧ್ಯಕ್ಷೆ ಬೆನೆಡಿಕ್ಟ್ ಸಾಲ್ಡಾನ, ಗ್ರಾ.ಪಂ ಸದಸ್ಯರುಗಳಾದ ಪ್ರಸಾದ್‌ ಶೆಟ್ಟಿ ಏಣಿಂಜೆ,ಮೋಹನ್ ದಾಸ್ , ತಾ.ಪಂ ಮಾಜಿ ಸದಸ್ಯ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕಿ ರೇಷ್ಮಾ ಮ‌ ಗಂಜಿಗಟ್ಟಿ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ‌ ಸಂದರ್ಭ ಮನೆಯವರು ಸೂಕ್ತ ಪರಿಹಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

error: Content is protected !!