ದ.ಕ. ಜಿಲ್ಲೆ ಲಾಕ್‌ಡೌನ್ ಅವಧಿ ತೆರವು ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ

 

ಧರ್ಮಸ್ಥಳ: ಕೋವಿಡ್-19 ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಮಾಡಲಾಗಿದ್ದು ಇದೀಗ ಸರಕಾರದ ಮಾರ್ಗಸೂಚಿಯಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವುಗೊಂಡಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ. 21ರ ತನಕ ಲಾಕ್ ಡೌನ್ ಮುಂದುವರೆದಿದೆ.

ಸರಕಾರದ ಮಾರ್ಗಸೂಚಿ ಅನ್ವಯ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಅವಧಿ ತೆರವು ಮಾಡಿದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಯಾತ್ರಿಕರಿಗೆ ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆಯುವರೇ ಅವಕಾಶವಿದೆ. ಈ ನಿಟ್ಟಿನಲ್ಲಿ ಸರಕಾರ ಹೊರಡಿಸಿದ ಕೋವಿಡ್ ಮಾರ್ಗಸೂಚಿಯನ್ನು ಭಕ್ತಾಧಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!