ವರ್ಷಾಂತ್ಯದೊಳಗೆ ಎಲ್ಲರಿಗೂ ವ್ಯಾಕ್ಸಿನ್‌ ಸಿಎಂ ಯಡಿಯೂರಪ್ಪ

ಬೆಂಗಳೂರು: ಎರಡು ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕುವ ಮೂಲಕ ರಾಜ್ಯ ಮತ್ತೊಂದು ಮೈಲುಗಲ್ಲು ತಲುಪಿದ್ದು, ವರ್ಷಾಂತ್ಯದೊಳಗೆ ಎಲ್ಲರಿಗೂ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ಲಸಿಕೆ ಹಾಕುವ ವಿಷಯದಲ್ಲಿ ಕರ್ನಾಟಕ ಹೊಸ ದಾಪುಗಾಲು ಇಟ್ಟಿದೆ. ನಿನ್ನೆಗೆ ರಾಜ್ಯದಲ್ಲಿ 2 ಕೋಟಿ ಕೋವಿಡ್‌ ಡೋಸ್‌ಗಳನ್ನು ನೀಡಲಾಗಿದೆ. ಅರ್ಹ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಹಾಕುವ ಗುರಿ ನಮ್ಮದಾಗಿದ್ದು, ವರ್ಷಾಂತ್ಯದೊಳಗೆ ನಾವು ನಮ್ಮ ಗುರಿ ತಲುಪಲಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

error: Content is protected !!