‘ಪರಿವರ್ತನೆಗಾಗಿ ಸೇವೆ’ ಧೇಯ ವಾಕ್ಯದಡಿ ಜು.1ರಂದು ರೋಟರಿ ಕ್ಲಬ್ ಬೆಳ್ತಂಗಡಿ ವಿರಿಚ್ಯುವಲ್ ಪದಗ್ರಹಣ: ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ ಅಧಿಕಾರ ಸ್ವೀಕಾರ: ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಧನಂಜಯ ರಾವ್ ಮಾಹಿತಿ: ರೋಟರಿ ನ್ಯೂಸ್ ರಾಷ್ಟ್ರೀಯ ಪತ್ರಿಕೆಯಲ್ಲಿ ಬೆಳ್ತಂಗಡಿ ಕ್ಲಬ್ 2020-21ನೇ ಸಾಲಿನ ಸಾಧನೆಯ 6 ಪುಟದ ವರದಿ ಪ್ರಕಟದ‌ ಸಾಧನೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಈ ಬಾರಿ 2021- 22 ನೇ ಸಾಲಿನಲ್ಲಿ SERVE TO CHANGE LIVES (ಪರಿವರ್ತನೆಗಾಗಿ ಸೇವೆ) ಎಂಬ ಧೈಯ ವಾಕ್ಯದಡಿಯಲ್ಲಿ ಸಮುದಾಯ ಸೇವೆ, ವೃತ್ತಿಪರ ಸೇವೆ, ಯುವಜನ ಸೇವೆ, ಅಂತರಾಷ್ಟ್ರೀಯ ಸೇವೆ, ಕ್ಲಬ್ ಸೇವೆ ಹಾಗೂ ಪರಿಸರ ಸೇವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ. 51ನೇ ಅಧ್ಯಕ್ಷರಾಗಿ ಶರತ್ ಕೃಷ್ಣಪಡ್ವೆಟ್ನಾಯ ಹಾಗೂ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಯು. ಎಚ್. ಅವರು ಸೇವೆಯನ್ನು ನೀಡಲಿದ್ದು, ರೋಟರಿ ಕ್ಲಬ್ ಬೆಳ್ತಂಗಡಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.1ರಂದು ಸಂಜೆ 7 ಗಂಟೆಗೆ ವರ್ಚುವಲ್ ಮೂಲಕ ನೆರವೇರಲಿದೆ ಎಂದರು.
2022-23ನೇ ಸಾಲಿನ ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ಆಗಿರುವ ಪ್ರಕಾಶ್ ಕಾರಂತ್ ಪದಗ್ರಹಣ ಅಧಿಕಾರಿಯಾಗಿ , ಮುಖ್ಯ ಅತಿಥಿಗಳಾಗಿ ಸಹಾಯಕ ರೋಟರಿ ಜಿಲ್ಲಾ ಗವರ್ನರ್ ಸುರೇಂದ್ರ ಕಿಣಿ , ಹಾಗೂ ನಿಕಟಪೂರ್ವ ಸಹಾಯಕ ಗವರ್ನರ್ ಪ್ರತಾಪ ಸಿಂಹ ನಾಯಕ್ ಇವರು ಭಾಗವಹಿಸಲಿದ್ದಾರೆ ಎಂದು ‌ರೋಟರಿ ಕ್ಲಬ್ ಅಧ್ಯಕ್ಷ, ನ್ಯಾಯವಾದಿ ಬಿ.ಕೆ ಧನಂಜಯ ರಾವ್ ಅವರು ಹೇಳಿದರು.

ಬೆಳ್ತಂಗಡಿ ಎಸ್‌ಡಿಎಂ ಪಿನಾಕಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‌
ಸುವರ್ಣ ಮಹೋತ್ಸವ ವರ್ಷದಲ್ಲಿರುವ ಬೆಳ್ತಂಗಡಿ ರೋಟರಿ ಕ್ಲಬ್ ಕೋವಿಡ್ ಎರಡನೇ ಅಲೆಯ ಹೊಡೆತದ ಅನೇಕ ಸಮಸ್ಯೆ ಸವಾಲುಗಳ ಮಧ್ಯೆಯೂ ಜನಪರವಾದ 1 ಸಾವಿರದಷ್ಟು  ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದಲ್ಲಿ ರೋಟರಿ ಇತಿಹಾಸದಲ್ಲೇ ಒಂದು ವರ್ಷದಲ್ಲಿ ಅತೀ ಹೆಚ್ಚು ಕಾರ್ಯಕ್ರಮ ಸಂಘಟಿಸಿದ ಕ್ಲಬ್ ಎಂದು ಗುರುತಿಸಿಕೊಂಡಿದೆ. ಜೊತೆಗೆ ರೋಟರಿ ನ್ಯೂಸ್ ರಾಷ್ಟ್ರೀಯ ಪತ್ರಿಕೆಯಲ್ಲಿ ಬೆಳ್ತಂಗಡಿ ಕ್ಲಬ್ಬಿನ ಕಾರ್ಯಕ್ರಮಗಳ 6 ಪುಟದ ವರದಿ ಬಂದಿರುವುದು ಸಂಘಟಿತ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮಂಗಳೂರಿನ ಸ್ಥಾಪಕ ಪ್ರಾಂಶುಪಾಲರು ಹಾಗೂ ಹಿರಿಯ ನ್ಯಾಯವಾದಿ ಎನ್ ಜೆ. ಕಡಂಬ ರವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ರೋಟರಿ ಕ್ಲಬ್ ಬೆಳ್ತಂಗಡಿ ಇದೀಗ ಸುವರ್ಣ ಮಹೋತ್ಸವ ವರ್ಷದಲ್ಲಿದೆ. ರೋಟರಿ ಕ್ಲಬ್‌ನ ಗೌರವ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ಸಹಕಾರದೊಂದಿಗೆ ಹಾಗೂ ಪೂರ್ವಾಧ್ಯಕ್ಷರುಗಳ ಕಾರ್ಯದರ್ಶಿಗಳು ಹಾಗೂ ಸದಸ್ಯರ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 50 ವರ್ಷಗಳಲ್ಲಿ ಹತ್ತು ಹಲವು ಸೇವಾ ಕಾಠ್ಯಕ್ರಮಗಳನ್ನು ಸಂಘಟಿಸಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕಾರ್ಯದರ್ಶಿ ಶ್ರೀಧರ ಕೆ.ವಿ, ನಿಯೋಜಿತ ಅಧ್ಯಕ್ಷ ಶರತ್‌ಕೃಷ್ಣ ಪಡುವೆಟ್ನಾಯ ಕಾರ್ಯದರ್ಶಿ ಅಬೂಬಕ್ಕರ್, ಪೂರ್ವಾಧ್ಯಕ್ಷ ಅರುಣ್ ಕುಮಾರ್ ಉಪಸ್ಥಿತರಿದ್ದರು.

error: Content is protected !!