ಗಂಡಿಬಾಗಿಲು, ಸಿಯೋನ್ ಆಶ್ರಮ ವಾಸಿಗಳಿಗೆ ಬಟ್ಟೆ ವಿತರಣೆ:

ಬೆಳ್ತಂಗಡಿ: ಗಂಡಿಬಾಗಿಲಿನ ಸಿಯೋನ್ ಆಶ್ರಮಕ್ಕೆ
ಬೆಸ್ಟ್ ಫೌಂಡೇಶನ್, ಬ್ರಹ್ಮಶ್ರೀ ಎಜುಕೇಶನ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಕೊರೊನಾ ಸೋಂಕು ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಆಶ್ರಮದ ಟ್ರಸ್ಟ್‌ ನಿರ್ದೇಶಕರು ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ವಕೀಲ ಹಾಗೂ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರ ಅಧ್ಯಕ್ಷ ಅನಿಲ್ ಪೈ, ಯುವ ಇಂಟೆಕ್ ನಗರ ಅಧ್ಯಕ್ಷ ನವೀನ್ ಗೌಡ, ಬೆಳ್ತಂಗಡಿ ಸೇವಾದಳ ಸಾಮಾಜಿಕ ಜಾಲತಾಣದ ಗಣೇಶ್ ಕಣಿಯೂರು, ಅಜಯ್ ಮಟ್ಲಾ, ಪ್ರಜ್ವಲ್ ಜೈನ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!