ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಶಿವ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ತಾಲೂಕು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಶಿವ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.

ಮೂಲತಃ ಸಾಗರದವರಾದ ಇವರು ಉತ್ತರಕನ್ನಡದ ಹಲವೆಡೆ ಕರ್ತವ್ಯ ನಿರ್ವಹಿಸಿ ಬೆಂಗಳೂರಿನಿಂದ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದರು. ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಸಂದೇಶ್ ಪಿ.ಜಿ. ಬಜಪೆ ಠಾಣೆಗೆ ವರ್ಗಾವಣೆ ಗೊಂಡಿದ್ದು ಇದೀಗ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬಳಿಕ ತಮ್ಮ ವ್ಯಾಪ್ತಿಯಾದ ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ, ಧರ್ಮಸ್ಥಳ,ಮತ್ತು ಸಂಚಾರಿ ಠಾಣೆಯ ಪಿಎಸ್ಐಗಳು ಅವರು ಗಳು ತಮ್ಮ ಠಾಣೆಯ ಪರವಾಗಿ ಹಾಗೂ ಸರ್ಕಲ್ ಆಫೀಸ್ ಸಿಬ್ಬಂದಿಗಳು ನೂತನ ಸರ್ಕಲ್ ಇನ್ಸ್ ಪೆಕ್ಟರ್ ಅವರನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು. ನಂತರ ತಮ್ಮ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದರು.

error: Content is protected !!