ಧರ್ಮಸ್ಥಳದ ಗ್ರಾಮಸ್ಥರಿಗೆ ಕೋವಿಡ್-19 ಲಸಿಕೆ ಅಭಿಯಾನ: ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಧರ್ಮಾಧಿಕಾರಿ ಡಾ. ಡಿ.‌ವೀರೆಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ವತಿಯಿಂದ ಧರ್ಮಸ್ಥಳದ ಗ್ರಾಮಸ್ಥರಿಗೆ ಕೋವಿಡ್ 19 ಲಸಿಕೆ ಅಭಿಯಾನ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೋಮವಾರ ನಡೆಯಿತು.

ಶಾಸಕ ಹರೀಶ್ ಪೂಂಜ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯ ಮೋನಪ್ಪ ಗೌಡ, ತಾಲೂಕು ವೈದಾಧಿಕಾರಿ ಡಾ. ಕಲಾಮಧು, ಧರ್ಮಸ್ಥಳ ಪ್ರಾ. ಅರೋಗ್ಯ ಕೇಂದ್ರದ ಆಡಳಿತ ವೈದಾಧಿಕಾರಿ ಡಾ. ಆಕಾಶ್, ತಾ.ಪಂ. ಮಾಜಿ ಅಧ್ಯಕ್ಷೆ ಧನಲಕ್ಷ್ಮೀ, ಪಿಡಿಒ ಉಮೇಶ್, ಲಸಿಕೆ ಸಂಯೋಜಕ ಉಮೇಶ್ ಕುಲಾಲ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಸ್ವಾಗತಿಸಿ, ಪ್ರಾಸ್ತಾವಿಸಿದರು. ಪ್ರಥ್ವೀಶ್ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!