8 ಜಿಲ್ಲಾ ಪಂಚಾಯತ್ ಕ್ಷೇತ್ರಗಳಿದ್ದರೂ ಅನುಸೂಚಿತ ವರ್ಗ, ಪಂಗಡಗಳಿಗೆ ಮೀಸಲಾತಿ ನೀಡದಿರುವುದು ಸಾಮಾಜಿಕ ನ್ಯಾಯದ ಉಲ್ಲಂಘನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಆರೋಪ: ಪರಿಶಿಷ್ಟ ಸಮುದಾಯ ಬೆರಳೆಣಿಕೆಯಲ್ಲಿರುವ ತೆಂಕ ಎಡಪದವು, ಮೂಡು ಶೆಡ್ಡೆ, ಕೋಣಾಜೆಯನ್ನು ಮೀಸಲು ಕ್ಷೇತ್ರವಾಗಿ ಎಂದು ಪರಿಗಣಿಸಿರುವುದು ಬೇಸರದ ಸಂಗತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ 42 ಕ್ಷೇತ್ರಗಳಿರುತ್ತದೆ ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 8 ಜಿಲ್ಲಾ ಪಂಚಾಯತ್ ಕ್ಷೇತ್ರಗಳಿವೆ. ಅದರೆ ಈ ಕ್ಷೇತ್ರಗಳ ಪೈಕಿ ಪ.ಜಾತಿ/ ಪಂಗಡಗಳಿಗೆಂದು ಕ್ಷೇತ್ರವನ್ನು ಅನುಸೂಚಿತ ವರ್ಗ ಮತ್ತು ಅನು ಸೂಚಿತ ಪಂಗಡಗಳಿಗೆ ಮೀಸಲಾಗಿರಿಸಿಲ್ಲ ಇದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕು ಶಾಖೆಯ ಪ್ರಧಾನ ಸಂಚಾಲಕ ಕೆ. ನೇಮಿರಾಜ ಹೇಳಿದರು.

ಅವರು ಗುರುನಾರಾಯಣ ಸಭಾ ಭವನದಲ್ಲಿ ಆಯೋಜಿಸಿದ್ದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ‌1993ರ ಸೆಕ್ಷನ್ 162ರ ಪ್ರಕಾರ ಅನುಸೂಚಿತ ಜಾತಿ ಮತ್ತು ಪಂಗಡಗಳಿಗೆ ಚುನಾವಣಾ ಕ್ಷೇತ್ರಗಳನ್ನು ಆಯಾ ವರ್ಗದ ಜನ ಸಂಖ್ಯೆಯ ಅಧಾರದಲ್ಲಿ ನಿಗದಿಪಡಿಸಲಾಗುತ್ತದೆ.‌ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಬೆಳ್ತಂಗಡಿ ತಾಲೂಕಿನಲ್ಲಿ ಈ ವರ್ಗಕ್ಕೆ ಸೇರಿದ ಜನಸಂಖ್ಯೆ ಅಧಿಕವಾಗಿದೆ.‌ ಭೌಗೋಳಿಕವಾಗಿ 81 ಗ್ರಾಮಗಳನ್ನು ಹೊಂದಿರುವ ಬೆಳ್ತಂಗಡಿ ತಾಲೂಕಿನ ಹಲವು ಪ್ರದೇಶಗಳು ಮೂಲ ಸೌಕರ್ಯಗಳಿಂದ ಇನ್ನೂ ಕೂಡಾ ವಂಚಿತವಾಗಿದೆ. ತಾಲೂಕಿನ ಹಲವು ಗ್ರಾಮಗಳು ನಕ್ಸಲ್ ಪೀಡಿತ ಪ್ರದೇಶಗಳಾಗಿವೆ. ಮೂಲ ಸೌಕರ್ಯಗಳಿಂದ ಇನ್ನೂ ಕೂಡಾ ವಂಚಿತವಾಗಿದೆ. ತಾಲೂಕಿನ ಹಲವು ಗ್ರಾಮಗಳು ನಕ್ಸಲ್ ಪೀಡಿತ ಪ್ರದೇಶಗಳಾಗಿವೆ. ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಈ ವರ್ಗದ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ಕ್ಷೇತ್ರವನ್ನು ಒದಗಿಸಬೇಕಾಗಿತ್ತು. ಅದರೆ ಈಗಾಗಲೇ ಹೊರಡಿಸಲಾದ ಜಿ. ಪಂ. ಮತ್ತು ತಾ.ಪಂ. ಮೀಸಲಾತಿ ಯ ಕರಡು ಅಧಿಸೂಚನೆಯಲ್ಲಿ ದ. ಕ. ಜಿಲ್ಲೆಯ ಮಂಗಳೂರು ಕ್ಷೇತ್ರಕ್ಕೆ ಒಳಪಡುವ ತೆಂಕ ಎಡಪದವು, ಮೂಡು ಶೆಡ್ಡೆ, ಕೋಣಾಜೆ ಕ್ಷೇತ್ರಗಳಲ್ಲಿ ಬೆರಳೆಣಿಕೆಯ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಸಮುದಾಯದ ಕ್ಷೇತ್ರಗಳನ್ನು ಮೀಸಲು ಕ್ಷೇತ್ರ ಎಂದು ಪರಿಗಣಿಸಿರುವುದು ತೀರಾ ಬೇಸರದ ಸಂಗತಿ. ಆ ಕ್ಷೇತ್ರಗಳಿಗೆ ಮೀಸಲಾದ ಮೀಸಲಾತಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಸಮುದಾಯದವರು ವಾಸವಿರುವ ಕ್ಷೇತ್ರಗಳನ್ನು ಪ. ಜಾತಿ ಮತ್ತು ಪಂಗಡದ ಮೀಸಲು ಕ್ಷೇತ್ರಗಳೆಂದು ತಿದ್ದುಪಡಿ ಮಾಡಬೇಕಾಗಿ ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುವುದರೊಂದಿಗೆ ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಬೇಕಾಗಿದೆ‌ ಎಂದರು.

ಹಿಂದಿನ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 6 ಜಿಲ್ಲಾ ಪಂಚಾಯತ್ ಕ್ಷೇತ್ರಗಳಿದ್ದಾಗ ಮತ್ತು 7 ಜಿಲ್ಲಾ ಪಂಚಾಯತ್ ಕ್ಷೇತ್ರಗಳಾಗಿ ಪುನರ್ ವಿಂಗಡಣೆಗೊಂಡಾಗ ಸಹ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಜಿಲ್ಲಾ ಪಂಚಾಯತ್ ಕ್ಷೇತ್ರವನ್ನೂ ಮೀಸಲಾಗಿರಿಸಿಲ್ಲ .ಅದ್ದರಿಂದ ಮೇಲೆ ತಿಳಿಸಿದ ಕರಡು ಅಧಿನಿಯಮಕ್ಕೆ ನಾವು ಜಿಲ್ಲಾ ಚುನಾವಣಾ ಅಧಿಕಾರಿಗೆ ಮತ್ತು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಯವರಿಗೆ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ. ಬೆಳ್ತಂಗಡಿ ತಾಲೂಕಿನ 8 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕನಿಷ್ಠ 2 ಸ್ಥಾನಗಳನ್ನು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಮೀಸಲಿರಿಸಬೇಕಾಗಿ ಒತ್ತಾಯಿಸುತಿದ್ದೇವೆ. ಪಂಚಾಯತ್ ರಾಜ್ ಅಧಿನಿಯಮದ ಕಲಂ 162(2)ರ ಪ್ರಕಾರ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಶೇಕಡಾ 50ರಷ್ಟು ಮೀರದಂತೆ ಕ್ಷೇತ್ರಗಳನ್ನು ನಿಗದಿಪಡಿಸಬೇಕಾಗಿದ್ದು ಈ ಕರಡು ಅಧಿನಿಯಮದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 42 ಕ್ಷೇತ್ರಗಳಲ್ಲಿ 21 ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಈ ವರ್ಗಗಳಿಗೆ ಮೀಸಲಿರಿಸಬಹುದು.‌ ಅದರೆ ಈಗ 19 ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಮೀಸಲಿರಿಸಿರುವುದರಿಂದ ಕನಿಷ್ಠ 2 ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಅನುಸೂಚಿತ ಜಾತಿ, ಅನುಸೂಚಿತ ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಬಹುದಾಗಿದೆ. ಅದ್ದರಿಂದ ತಾಲೂಕಿನ 8 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿಬ ಕನಿಷ್ಠ 2 ಸ್ಥಾನಗಳನ್ನು‌ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಮೀಸಲಿರಿಸಬೇಕಾಗಿ ಆಗ್ರಹಿಸುತಿದ್ದೇನೆ ಎಂದರು.

ರಾಜ್ಯ ಸಂಘಟನಾ ಸಂಚಾಲಕ ಎಲ್. ಚಂದು ಮಾತನಾಡಿ, ತಾಲೂಕಿನ 81 ಗ್ರಾಮಗಳಲ್ಲಿ ಅತೀ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಜನರಿದ್ದಾರೆ ಅದರಲ್ಲೂ 17 ಗ್ರಾಮಗಳು ನಕ್ಸಲ್ ಭಾದಿತ ಪ್ರದೇಶ ಇದನ್ನೆಲ್ಲ ಪರಿಗಣಿಸಿ ಮೀಸಲಾತಿ ಘೋಷಣೆ ಮಾಡಬೇಕಿತ್ತು ಅದಲ್ಲದೆ ಇದಕ್ಕಿಂತ ಮೊದಲೇ ಸುಳ್ಯ ವಿಧಾನ ಸಭಾ ಕ್ಷೇತ್ರವನ್ನು ಅಲ್ಲಿಂದ ತೆಗೆದು ಇಲ್ಲಿ ಮೀಸಲು ಕ್ಷೇತ್ರ ಘೋಷಣೆ ಮಾಡುವಂತಹ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಿತ್ತು. ಈ ಬಗ್ಗೆ ಹಲವು ಬಾರಿ ಚುನಾವಣಾ ಆಯೋಗಕ್ಕೆ ಹಾಗೂ ಸಂಬಂಧ ಪಟ್ಟ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಯಾವ ಸರ್ಕಾರಗಳೂ ನಮ್ಮ ಮನವಿಯನ್ನು ಪರಿಗಣನೆಗೆ ತೆಗೆದುಕೊಳ್ಳದೇ ದಲಿತ ಸಂಘಟನೆಗಳ ಹೋರಾಟ ಕೇವಲ ಅರಣ್ಯರೋಧನದಂತಾಗಿದೆ. ಅದ್ದರಿಂದ ನಾವು ಈ ಮೂಲಕ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡುವುದೇನೆಂದರೆ ಸುಳ್ಯ ವಿಧಾನ ಸಭಾ ಕ್ಷೇತ್ರವನ್ನು ತೆಗೆದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರವನ್ನು ಮೀಸಲು ಕ್ಷೇತ್ರವನ್ನಾಗಿ ಘೋಷಿಸುವ ಮೂಲಕ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುವಂತಹ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಮಾಡುತ್ತಿದ್ದೇವೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಈಗಾಗಲೇ ಮೀಸಲಾತಿ ಪ್ರಕಟಗೊಂಡಿದ್ದು ಅದರಲ್ಲಿ ಅತೀ ಹೆಚ್ಚು ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಜನ ಸಂಖ್ಯೆ ಇರುವ ಬೆಳ್ತಂಗಡಿಗೆ ಒಂದೇ ಒಂದು ಮೀಸಲಾತಿ ನೀಡದೇ ಇರುವುದು ಸಮುದಾಯದಲ್ಲಿ ಇರುವ ಜನ ಪ್ರತಿನಿಧಿಗಳ ಹೋರಾಟವನ್ನು ಹತ್ತಿಕ್ಕುವಂತಹ ಕೆಲಸ ನಡೆಯುತ್ತಿದೆ. ಅದಲ್ಲದೇ ಬಿಜೆಪಿ ನಾಯಕರುಗಳು ಸಂವಿಧಾನ ಬದಲಾಯಿಸಬೇಕು, ಮೀಸಲಾತಿ ತೆಗೆಯಬೇಕು ಎಂಬ ಒತ್ತಾಯವನ್ನು ಮಾಡುತಿದ್ದಾರೆ. ಅದರ ಭಾಗವಾಗಿ ಬೆಳ್ತಂಗಡಿಯಲ್ಲಿ ಮೀಸಲು ಕ್ಷೇತ್ರದ ಹುಟ್ಟಡಗಿಸುವ ಕೆಲಸವನ್ನು ಮಾಡುತಿದ್ದಾರೆ ಎಂಬ ಸಂಶಯ ಕಾಡುತಿದೆ. ಈ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದಲಿತ ಸಮುದಾಯದವರಿಗೆ ಉತ್ತರವನ್ನು ಕೊಡಬೇಕು ಎಂಬ ಒತ್ತಾಯವನ್ನು ಮಾಡುತಿದ್ದೇವೆ ಅವರು ನನ್ನ ಕೈವಾಡ ಇಲ್ಲ ಎಂದು ಅಣೆ ಪ್ರಮಾಣ ಮಾಡುವುದಲ್ಲ ಚುನಾವಣೆ ಆಯೋಗಕ್ಕೆ ಹಾಗೂ ಸರ್ಕಾರಕ್ಕೆ ಒತ್ತಾಡ ಹಾಕಿ ಇಲ್ಲದಿದ್ದರೆ ಹೈಕೊರ್ಟಿಗೆ ರಿಟ್ ಅರ್ಜಿ ಸಲ್ಲಿಸಿ ತನ್ನ ನೈತಿಕತೆಯನ್ನು ತೋರಿಸಬೇಕು ಎಂಬ ಒತ್ತಾಯವನ್ನು ಮಾಡುತ್ತಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಭಾಗೀಯ ಸಂಚಾಲಕ ಬಿ. ಕೆ. ವಸಂತ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಣ್ಣ ಕೊಯ್ಯೂರು, ಜಿಲ್ಲಾ ಖಜಾಂಚಿ ಶ್ರೀಧರ ಕಳೆಂಜ, ತಾಲೂಕು ಸಂಘಟನಾ ಸಂಚಾಲಕ ಶೇಖರ್ ಕುಕ್ಕೇಡಿ ಉಪಸ್ಥಿತರಿದ್ದರು.

error: Content is protected !!