ಕೋವಿಡ್ ನಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟ ರೈತರ 1 ಲಕ್ಷ ರೂ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಸಚಿವರು, ಕೋವಿಡ್​ನಿಂದ ಮೃತಪಟ್ಟ ರೈತರ ಸಾಲದ ಮೊತ್ತದ ರೂ 1 ಲಕ್ಷ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದಾರೆ.

ರಾಜ್ಯದಲ್ಲಿ ಸುಮಾರು 10,187 ರೈತರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಅವರ 79, 47 ಕೋಟಿ ರೂ ಸಾಲ ಮನ್ನಾ ಮಾಡಲು ಮುಂದಿನ 3-4 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಅಪೆಕ್ಸ್​, ಡಿಸಿಸಿ ಬ್ಯಾಂಕ್​ & ಪ್ಯಾಕ್ಸ್​ಗಳಲ್ಲಿ ಸಾಲ ಪಡೆದ ರೈತರಿಗೆ ಇದು ಅನ್ವಯವಾಗಲಿದೆ ಎಂದಿದ್ದಾರೆ. ಈ ಬಗ್ಗೆ ಬ್ಯಾಂಕ್​ಗಳ ಎಂಡಿಗಳೊಂದಿಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು.

ಈಗಾಗಲೇ ಕೋವಿಡ್​ನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವಯಸ್ಕರ ಕುಟುಂಬಕ್ಕೆ 1 ಲಕ್ಷ ರೂ. ನೀಡಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ ಎಂದರು.

error: Content is protected !!