ಹೈಕಮಾಂಡ್​ ತೀರ್ಮಾನಕ್ಕೆ ನಾನು ಬದ್ಧ :ಸಿಎಂ ಯಡಿಯೂರಪ್ಪ.

 

 

ಬೆಳಗಾವಿ: ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಪಕ್ಷದಲ್ಲಿ ನಾನು ತೃಪ್ತಿಯಿಂದ ಇದ್ದೇನೆ. ಬಹುಶಃ ನನಗೆ ಸಿಕ್ಕಿರುವ ಅವಕಾಶ ಯಾರಿಗೂ ಸಿಕ್ಕಿಲ್ಲ. ಅದಕ್ಕಾಗಿ ನಾನು ಪ್ರಧಾನಿ ಮೋದಿ, ಅಮಿತ್​ ಶಾ ಮತ್ತು ನಡ್ಡಾ ಅವರಿಗೆ ಕೃತಜ್ಞನಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದರು.ಅವರು
ಬೆಳಗಾವಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿ, ನಾನು ಹೈಕಮಾಂಡ್​ ಹಾಕಿದ ಗೆರೆ ದಾಟುವುದಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಎಲ್ಲರೂ ಪಕ್ಷದಲ್ಲಿ ಒಗ್ಗಟ್ಟಿನಿಂದ ಇದ್ದೇವೆ. ನೂರು ಜನ ಸಿದ್ದರಾಮಯ್ಯ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

error: Content is protected !!