ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂದಾರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ -19 ಲಾಕ್ ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ವರ್ಗದ ಬಂಧುಗಳಿಗೆ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಇವರ ಅನುದಾನ ಹಾಗೂ ಜನಪ್ರಿಯ ಶಾಸಕ ಹರೀಶ್ ಪೂಂಜರ ಮುತುವರ್ಜಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಬಂದಾರು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಕೆ‌ ಗೌಡ,ಉಪಾಧ್ಯಕ್ಷ ಗಂಗಾಧರ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಭಾರತೀಯ ಮಜ್ದೂರ್ ಸಂಘದ ತಾಲ್ಲೂಕು ಅಧ್ಯಕ್ಷ ಉದಯ್.ಬಿ.ಕೆ ಗ್ರಾ.ಪಂ ಸದಸ್ಯರಾದ ದಿನೇಶ್ ಗೌಡ,ಚೇತನ್ ಗೌಡ,ಮೋಹನ್ ಗೌಡ,ಸುಚಿತ್ರಾ, ಮಂಜುಶ್ರೀ,ಪುಷ್ಪಾವತಿ, ಅನಿತಾ,ವಿಮಲಾ,ಶಿವ ಗೌಡ ಶಿವ ಪ್ರಸಾದ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗಿರೀಶ್ ಗೌಡ ಬಿ.ಕೆ,ಪ್ರಶಾಂತ್ ಗೌಡ ಸಹಕರಿಸಿದರು.

error: Content is protected !!