ರೈತರ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಚಿಂತನೆ ಇಲ್ಲ. ಇದು ಕೇವಲ ವಂದತಿ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಚಿಂತನೆ ಇಲ್ಲ.  ವದಂತಿಯನ್ನು ರೈತರು ನಂಬ ಬಾರದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸೌರ ವಿದ್ಯುತ್ ಯೋಜನೆಗಳಲ್ಲಿ ಈ ಹಿಂದಿನ ಹಗರಣ ತನಿಖೆ ನಡೆಸಬೇಕೆಂಬ ಈ‌ ಹಿಂದೆ ನಾನು ಮಾಡಿದ್ದ ಒತ್ತಾಯಕ್ಕೆ ಈಗಲೂ ಬದ್ಧನಾಗಿದ್ದೇನೆ. ಇಲಾಖೆಯಲ್ಲಿ ಮುಂಚೆ ಆಗಿರುವ ತಪ್ಪುಗಳನ್ನು ಸರಿಪಡಿಸಿ, ಸುಧಾರಣೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆಯುತ್ತೇನೆ. ಲೋಪದೋಷಗಳೇನಾದರು ಆಗಿದ್ದರೆ ತನಿಖೆಗೆ ಸಿದ್ಧನಿದ್ದೇನೆ ಎಂದರು.

ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸುವ ಯಾವುದೇ ಚಿಂತನೆ ಇಲ್ಲ. ಈ ಸಂಬಂಧ ಇರುವ ಊಹಾಪೋಹಗಳಿಗೆ ರೈತರು ಕಿವಿಗೊಡಬಾರದು. ಇಲಾಖೆಯನ್ನು ಜನ ಸ್ನೇಹಿಯಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ರೈತರಿಗೆ ನಿರಂತರ ವಿದ್ಯುತ್ ಪೂರೈಸಲು ಎಲ್ಲಾ ಯತ್ನ ಮಾಡಲಾಗುವುದು. ಇಲಾಖೆಯಲ್ಲಿನ ಎಲ್ಲಾ ಹಂತಗಳಲ್ಲಿ ಸುಧಾರಣೆ ತಂದು, ಇಲಾಖೆಯನ್ನು ಕ್ರಿಯಾಶೀಲಗೊಳಿಸಲಾಗುವುದು ಎಂದು ತಿಳಿಸಿದರು.

error: Content is protected !!