ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಹಿನ್ನೆಲೆ: ಕಣಿಯೂರು ಗ್ರಾ.ಪಂ.ನಿಂದ ಪದ್ಮುಂಜ ಪೇಟೆ ಸ್ವಚ್ಛತೆ, ಜಾಗೃತಿ ಕಾರ್ಯ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಪ್ರಯುಕ್ತ ಪದ್ಮುಂಜ ಪೇಟೆಯಲ್ಲಿ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಸದಸ್ಯ ಯಶೋಧರ ಶೆಟ್ಟಿ, ಅಮಿತ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಗೌಡ,ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಬು ಗೌಡ, ನಿರ್ದೇಶಕಿ ಶಾರದಾ ಗೌಡ, ತಾ.ಪಂ. ಮಾಜಿ ಸದಸ್ಯ ಕೃಷ್ಣಯ್ಯ ಆಚಾರ್ಯ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ, ಅವಿನಾಶ್ ರಾವ್, ಪ್ರಸ್ತುತ್ ಜೈನ್, ಪುರಂದರ ಗೌಡ, ಪದ್ಮುಂಜ ರಿಕ್ಷಾ ಚಾಲಕರು- ಮಾಲಕರು, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

error: Content is protected !!