ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಭೋಜರಾಜ ಹೆಗ್ಡೆಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತ ಗೊಳಿಸಲು ಹೋರಾಡಿದ ಭೋಜರಾಜ ಹೆಗ್ಡೆಯವರಂತಹ ಹಿರಿಯ ಸ್ವತಂತ್ರ್ಯ ಹೋರಾಟಗಾರರು ನಮಗೆ ಪ್ರಾತಃ ಸ್ಮರಣೀಯರು ಮತ್ತು ನಮ್ಮ ಯುವ ಪೀಳಿಗೆಗೆ ಸ್ಪ್ಪೂರ್ತಿ ಎಂದರು.

error: Content is protected !!