ಲಾಯಿಲ ಕನ್ನಾಜೆ ಸಮೀಪ ವ್ಯಕ್ತಿ ಆತ್ಮಹತ್ಯೆ

 

ಬೆಳ್ತಂಗಡಿ: ಲಾಯಿಲ ಗ್ರಾಮದ ಕನ್ನಾಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಪ್ರವೀಣ್ ಶೆಟ್ಟಿ (38) ಇವರು ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದು ಬೆಳಗ್ಗೆ ಕೋಣೆಯ ಬಾಗಿಲು ತೆರೆಯದೆ ಇದ್ದಾಗ ಪತ್ನಿ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ತಕ್ಷಣ ಹತ್ತಿರದ ಮನೆಯಲ್ಲಿ ಇದ್ದ ತಮ್ಮನಿಗೆ ಮಾಹಿತಿ ನೀಡಿದ್ದಾರೆ ಅವರು ಬಂದು ಇಣುಕಿ ನೋಡಿದಾಗ ಕೋಣೆಯ ಪ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

 

ಗಾರೆ ಕೆಲಸ ಮಾಡುತಿದ್ದ ಇವರು ಕಳೆದ ಒಂದು ವರುಷದ ಹಿಂದೆ ಹೊಸ ಮನೆ ಕಟ್ಟಿ ಹೆಂಡತಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಒಂದು ವಾರಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೆ ಇದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ನಂದ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!