ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು: ವ್ಯಕ್ತಿಯ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

 

 

 

 

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ ಎಸ್‌ಬಿಎಂಎಲ್ ಕೋವಿಯನ್ನು ಉಪಯೋಗಿಸುವಲ್ಲಿ ಅಜಾಗರೂಕತೆ ಮಾಡಿದ ಪರಿಣಾಮ ಕೋವಿ ನೆಲಕ್ಕೆ ಬಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದು ಅಂಗಳದಲ್ಲಿ ನಿಂತಿದ್ದ ಕುಮಾರಯ್ಯ ನಾಯ್ಕ ಎಂಬವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಗಾಯಾಳುವನ್ನು ವಿಶ್ವನಾಥ ನಾಯ್ಕ ರವರು ಆರೈಕೆ ಮಾಡಿ ಚಿಕಿತ್ಸೆಯ ಬಗ್ಗೆ ವಾಹನವೊಂದರಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ ಮೇರೆಗೆ, ಗಾಯಾಳುವನ್ನು ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಗಾಯಾಳುವನ್ನು ಒಳ ರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: Content is protected !!