ಪಡಂಗಡಿ ಬೋಜರಾಜ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

 

 

 

ಬೆಳ್ತಂಗಡಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹಗ್ಡೆಯವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ

ಪಡಂಗಡಿಯ ಶ್ರೀ ಭೋಜರಾಜ ಹೆಗ್ಡೆಯವರ ನಿಧನದ ವಿಚಾರ ತಿಳಿಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಇವರು ಬೆಳ್ತಂಗಡಿ ತಾಲೂಕಿನ ಜನರರೊಂದಿಗೆ ಬೆರೆತು ಸದಾ ಜನಹಿತವನ್ನು ಬಯಸುತ್ತಿದ್ದರು. 90ರ ವಯಸ್ಸಿನ ನಂತರವೂ ತಾಲೂಕಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಾ ಜನರನ್ನು ಪ್ರೆರೇಪಿಸುತ್ತಿದ್ದರು.
ನಮ್ಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿ ನಮ್ಮನ್ನು ಪ್ರೋತ್ಸಾಹಿಸುತ್ತಿದ್ದರು. ಅವರಂತಹ ಹಿರಿಯರನ್ನು ಕಳೆದುಕೊಂಡ ತಾಲೂಕು ಬಡವಾಗಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಶ್ರೀ ಮಂಜುನಾಥ ಸ್ವಾಮಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.ಎಂದು ಸಂತಾಪ ಸೂಚಿಸಿದ್ದಾರೆ.

error: Content is protected !!