ಮಂಗಳೂರು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

 

 

 

 

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಸಮೀಪ ನಡೆದಿದೆ.

ನಾಗೇಶ್ ಶೇರಿಗುಪ್ಪಿ (30), ಪತ್ನಿ ವಿಜಯಲಕ್ಷ್ಮಿ (26) ಮಕ್ಕಳಾದ ಸಪ್ನ (8) ಮತ್ತು ಸಮರ್ಥ್ (4) ಸಾವಿಗೀಡಾದವರು. ನಾಗೇಶ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ವಿಷ ಸೇವನೆ ಮಾಡಿ ಮೃತಪಟ್ಟಿದ್ದಾರೆ. ಇವರು ಮೋರ್ಗನ್ಸ್​​ ಸ್ಟ್ರೀಟ್​ನಲ್ಲಿ ​ವಾಸಿಸುತ್ತಿದ್ದು.ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಗ್ರಾಮದ ಸುನಗ್ ಗ್ರಾಮದವರಾಗಿದ್ದಾರೆ. ನಾಗೇಶ್ ಚಾಲಕನಾಗಿ ಮತ್ತು ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!