ಬೆಳ್ತಂಗಡಿ ಸ್ನಾನಕ್ಕೆ ತೆರಳಿದ ವಿದ್ಯಾರ್ಥಿ ನೀರಿನಲ್ಲಿ‌ಮುಳುಗಿ ಸಾವು

 

 

 

ಬೆಳ್ತಂಗಡಿ : ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಸಾವನ್ನಪ್ಪಿದ ವಿದ್ಯಾರ್ಥಿ ಮೂಡಿಗೆರೆ ತಾಲ್ಲೂಕು ಜಾವಳಿ ಮಲೆಮನೆಯ ನರೇಂದ್ರರವರ ಮಗ ಸಮರ್ಥ್ ಎಂ. ಎನ್. (16). ಈತ ಬೆಳ್ತಂಗಡಿಯ ಖಾಸಗಿ ವಸತಿ ಗೃಹದಲ್ಲಿ ಇದ್ದು ಸ್ಥಳೀಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ತನ್ನ ಸ್ನೇಹಿತ ಕೃತಿಕ್ ಎಂ. ಇ ಜೊತೆ ಬೆಳ್ತಂಗಡಿ ಸಮೀಪದ ಸೋಮಾವತಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಎನ್ನಲಾಗಿದೆ.

ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ನಡೆಯುತ್ತಿರುವುದರಿಂದ ಮಧ್ಯಾಹ್ನದ ಬಳಿಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿ ಇತ್ತು. ಈ ವಿದ್ಯಾರ್ಥಿಗಳು ಮಧ್ಯಾಹ್ನ ಖಾಸಗಿ ವಸತಿ ಗೃಹದಿಂದ ಕಾಲೇಜಿಗೆಂದು ಹೊರಟು ನದಿಗೆ ಹೋಗಿದ್ದರು ಎಂದು ಹೇಳಲಾಗಿದೆ. ಸಮರ್ಥ್ ಕಾಲೇಜಿಗೆ ಪ್ರತಿನಿತ್ಯ ಹಾಜರಾಗುತ್ತಿದ್ದ ವಿದ್ಯಾರ್ಥಿಯಾಗಿದ್ದು ಕಲಿಕೆಯಲ್ಲಿ ಆಸಕ್ತಿ ಇದ್ದ ವಿದ್ಯಾರ್ಥಿಯಾಗಿದ್ದ.

error: Content is protected !!