ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ನಡ ಇಲ್ಲಿ ಗುರುಪೂಜೆ ಹಾಗೂ ಸಮಾಲೋಚನಾ ಸಭೆ ಜ 02 ರಂದು ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ್ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಳ್ತಂಗಡಿ
ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ನಾವೆಲ್ಲರೂ ನಾರಾಯಣ ಗುರುಗಳ ಆದರ್ಶಗಳನ್ನು ಪಾಲಿಸಿಕೊಂಡು ಎಲ್ಲರನ್ನೂ ಪ್ರೀತಿಯಿಂದ ಕಾಣಬೇಕು ಈ ಮೂಲಕ ಸದೃಢ ಸಮಾಜದ ಚಿಂತನೆಯನ್ನು ಮಾಡಬೇಕು ಎಂದರು.ಮುಂದಿನ ದಿನಗಳಲ್ಲಿ ಸಂಘದ ಎಲ್ಲಾ ಚಟುವಟಿಕೆಗಳಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಜಯ ಕುಮಾರ್ ನಡ ,ದೇವೇಂದ್ರ ಪೂಜಾರಿ ಕುದ್ಪಲ,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.