ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು ಇ ಕೆವೈಸಿ( E KYC)ಮಾಡಿಸುವುದು ಕಡ್ಡಾಯ. 2022 ಮಾ 31ರ ಒಳಗೆ ಮಾಡುವಂತೆ ಸೂಚನೆ.

 

 

 

 

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದುದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು PM-KISAN ಪೋರ್ಟಲ್‌ನ Farmers Corner ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ವೀಕರಿಸಿದ OTP ಯನ್ನು ದಾಖಲಿಸಿ E-KYC ಮಾಡಿಸಿಕೊಳ್ಳಬಹುದಾಗಿದೆ ಅಥವಾ ಯಾವ ಫಲಾನುಭವಿಯ ಆಧಾರ್‌ ಸಂಖ್ಯೆಗೆ ಮೊಬೈಲ್ ಸಂಖ್ಯೆಯು ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆಗೆ E-KYC ಗಾಗಿ ಕಳಿಸಿದ OTP ಯು ಸ್ವೀಕೃತವಾಗುವುದಿಲ್ಲವೊ ಅಂತಹ ರೈತರು ನಾಗರಿಕ ಸೇವಾ ಕೇಂದ್ರಗಳಿಗೆ (CSC) ತೆರಳಿ ಬಯೋಮೆಟ್ರಿಕ್’ ಮೂಲಕ E-KYCನ್ನು ದಿನಾಂಕ: 31.03.2022 ರ ಒಳಗೆ E-KYC ಮಾಡಿಸಿಕೊಳ್ಳಲು ಅವಕಾಶ ಇದೆ.

(ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡುವುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!