ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನೀಲ್ ಕುಮಾರ್ ನೇಮಕ.

 

 

 

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ಕಳೆದ ಆರು ತಿಂಗಳಿನಿಂದ ನೆನಗುದಿಗೆ ಬಿದ್ದಿದ್ದ ಜಿಲ್ಲಾ ಉಸ್ತುವಾರಿಗಳ‌ ನೇಮಕ ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ. ನಿರೀಕ್ಷೆಯಂತೆ ಬೆಂಗಳೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಉಳಿದ ಜಿಲ್ಲೆಗಳನ್ನು ಸಚಿವರಿಗೆ ಹಂಚಿಕೆ ಮಾಡಲಾಗಿದೆ.

ಬಹುತೇಕ ಸಚಿವರಿಗೆ ತಮ್ಮ ಸ್ವಂತ ಜಿಲ್ಲೆಗಳು ಸಿಕ್ಕಿಲ್ಲ. ಈ ಹಿಂದೆ ಕೋವಿಡ್ ಉಸ್ತುವಾರಿ ವಹಿಸಿಕೊಂಡಿದ್ದ ಜಿಲ್ಲೆಗಳೂ ಸಹ ಸಚಿವರಿಗೆ ಅದಲು-ಬದಲಾಗಿವೆ. ಜನವರಿ 26ಕ್ಕೆ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಬೇಕಿದೆ.ಹಾಗಾಗಿ, ಪೂರ್ಣ ಪ್ರಮಾಣದ ಜಿಲ್ಲಾ ಉಸ್ತುವಾರಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಆಯಾ ಜಿಲ್ಲಾ ಸಚಿವರಿಗೆ ಕೋವಿಡ್ ಉಸ್ತುವಾರಿಯನ್ನೂ ಸಹ ವಹಿಸಲಾಗಿದೆ. ಕೆಲ ಸಚಿವರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

.ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಈ ಕೆಳಕಂಡಂತೆ ಇದೆ..

 

 

 

 

error: Content is protected !!