ಪದ್ಮುಂಜ ಪದವಿಪೂರ್ವ ಕಾಲೇಜು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

 

 

 

ಬೆಳ್ತಂಗಡಿ:ಪದ್ಮುಂಜ ಪದವಿಪೂರ್ವ ಕಾಲೇಜಿಗೆ ಹೆಚ್ಚುವರಿಯಾಗಿ ಎರಡು ಕೊಠಡಿಗಳ ನಿರ್ಮಾಣಕ್ಕೆ ರೂ 55 ಲಕ್ಷ ಅನುದಾನ ಬಿಡುಗಡೆಗೊಳಿಸಿ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ
ನೆರವೇರಿಸಿದರು.
ಈ ಸಂಧರ್ಭದಲ್ಲಿ ಕಣಿಯೂರು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಬಂದಾರು ಗ್ರಾ.ಪಂ‌ ಸದಸ್ಯರಾದ ಶ್ರೀಮತಿ ಪರಮೇಶ್ವರಿ ಕೆ. ಗೌಡ,ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ರಾಜೀವ ರೈ, ಕಣಿಯೂರು ಮಹಾ ಶಕ್ತಿ ಕೇಂದ್ರ ‌ಅಧ್ಯಕ್ಷರಾದ ಜಯಾನಂದ ಕಲ್ಲಾಪು,ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಗ್ರಾ.ಪಂ‌ ಸದಸ್ಯರಾದ ದಿನೇಶ್ ಗೌಡ ಖಂಡಿಗ,ಚೇತನ್ ಪಾಲ್ತಿಮಾರು, ವೇಣುಗೋಪಾಲ ,ಮಾಜಿ ತಾ.ಪಂ ಸದಸ್ಯರಾರ ಶ್ರೀಮತಿ ಅಮಿತಾ ಕುಶಾಲಪ್ಪ ಗೌಡ,ಕೃಷ್ಣಯ್ಯ ಆಚಾರ್ಯ, ಯತೀಶ್ ಪಣೆಕ್ಕರ, ಪುರಂದರ ಶೆಟ್ಟಿ ‌ಪಣೆಕ್ಕರ, ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ಉರುಂಬುತ್ತಿಮಾರು,ಅವಿನಾಶ್ ಪದ್ಮುಂಜ, ಗಿರೀಶ್ ಗೌಡ ಬಿ.ಕೆ ಬಂದಾರು ಉಪಸ್ಥಿತರಿದ್ದರು

error: Content is protected !!