ಹಿಜಾಬ್ ನಿರ್ಭಂಧ ವಿಚಾರಣೆ, ನಾಳೆಗೆ ಮುಂದೂಡಿಕೆ: ಅಂತಿಮ ತೀರ್ಪಿನವರೆಗೆ ವಿದ್ಯಾರ್ಥಿಗಳು ಧಾರ್ಮಿಕ ವಸ್ತ್ರ ಧರಿಸದಂತೆ ಹೈಕೋರ್ಟ್ ನಿರ್ದೇಶನ

 

 

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ದಾಖಲಿಸಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿ ಬಳಿಕ ನಾಳೆಗೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನಿರ್ದೇಶಿಸಿದೆ. ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಿಗೆ ಈ ನಿರ್ಬಂಧ ಅನ್ವಯಿಸಲಿದೆ ಎಂದೂ ಪೀಠ ಸ್ಪಷ್ಟಪಡಿಸಿದೆ.

error: Content is protected !!