ನಾಳೆಯಿಂದ ಪಿಯುಸಿ, ಡಿಗ್ರಿ ಕಾಲೇಜು ಆರಂಭ. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಧಾರ.

 

 

 

ಬೆಂಗಳೂರು: ನಾಳೆಯಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಜಾಬ್- ಕೇಸರಿ ಶಾಲು ಗಲಾಟೆ ಸಂಬಂಧ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16 ಬುಧವಾರದಿಂದ ಪಿಯುಸಿ, ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶಕ್ತಿ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಕೋರ್ಟ್ ನ ಸೂಚನೆ ಇದೆ, ಅದನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಿದರು.ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗುತ್ತದೆ ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.

 

error: Content is protected !!