ಪೊಲೀಸ್​ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾದ ಕಳ್ಳ ಮಂಗಳೂರಿನ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

 

 

 

ಮಂಗಳೂರು: ಬೆಳೆಬಾಳುವ ದುಬಾರಿ ವಾಚ್​ ಮಾರಾಟಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಚಾರಿಸಲು ಹೋಗಿದ್ದ ಪೊಲೀಸ್ ಸಿಬ್ಬಂದಿಗೆ ಕಳ್ಳನೊಬ್ಬ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಸರಗೋಡು ಮೂಲದವನೆಂದು ಪರಿಚಯ ಮಾಡಿಕೊಂಡ ವ್ಯಕ್ತಿ ನಗರದ ವಾಚ್ ಅಂಗಡಿಯೊಂದಕ್ಕೆ ಸೋಮವಾರ ಸಂಜೆ 6 ಆಗಮಿಸಿದ್ದು. ಈತ ತನ್ನ ಬಳಿಯಿದ್ದ ದುಬಾರಿ ವಾಚ್​ವೊಂದನ್ನು ಮಾರಾಟಕ್ಕೆ ಯತ್ನಿಸಿದ್ದಾನೆ. ಆತ ಅನುಮಾನಾಸ್ಪದವಾಗಿ ಕಂಡು ಬಂದಿದ್ದ ಕಾರಣ ಅಂಗಡಿಯವರು ಬಂದರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಯ ಸಿಬ್ಬಂದಿ ಆತನನ್ನು ವಶಕ್ಕೆ ಪಡೆಯಲು ಬಂದಿದ್ದಾರೆ. ಆಗ ಆರೋಪಿ ಹೆಡ್ ಕಾನ್​ಸ್ಟೇಬಲ್ ವಿನೋದ್ ಎಂಬುವರಿಗೆ ಚೂಪಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ.
ತಕ್ಷಣ ಗಾಯಾಳು ವಿನೋದ್​ ಅವರನ್ನು ಯೆನಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ವಾಟ್ಸಪ್ ಗ್ರೂಪ್​ಗಳಲ್ಲಿ ಗೊಂದಲದ ಹೇಳಿಕೆಗಳು ಹರಿದಾಡುತಿದ್ದು. ಈ ಪ್ರಕರಣದ ಬಗ್ಗೆ ಯಾವುದೇ ಅಪಪ್ರಚಾರಗಳನ್ನು ಹರಡದಂತೆ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮನವಿ ಮಾಡಿದ್ದಾರೆ.ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

error: Content is protected !!