ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಘಟನೆ

 

 

ಮಂಗಳೂರು: ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವೀಲ್ ತುಂಡಾಗಿ ನಾಲ್ಕು ಮಕ್ಕಳಿಗೆ ಗಾಯಗಳಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉರೂಸ್ ಪ್ರಯುಕ್ತ ಮಸೀದಿಗೆ ಬಂದಿದ್ದ ಕೇರಳ ಮೂಲದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್​ನಲ್ಲಿ ಆಟವಾಡುತ್ತಿದ್ದರು. ಈ ವೇಳೆ, ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ಮಕ್ಕಳು ಕೆಳಕ್ಕೆ ಬಿದ್ದರು.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದರು.

error: Content is protected !!