ದಿನೇಶ್ ಕುಟುಂಬಕ್ಕೆ ಪರಿಹಾರ ಮೊತ್ತ ವಿತರಿಸಿದ ಜಿಲ್ಲಾಡಳಿತ

 

 

 

ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿನೇಶ್ ಅವರ ಕುಟುಂಬಕ್ಕೆ ಪರಿಹಾರ ಧನವನ್ನು ಸೋಮವಾರ ದ.ಕ ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಮೃತ ದಿನೇಶ್ ಅವರ ಪತ್ನಿ ಕವಿತಾ ದಿನೇಶ್ ಅವರ ಕೆನರಾ ಬ್ಯಾಂಕ್ ಖಾತೆಗೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಜಂಟಿ ಖಾತೆಯಿಂದ 4,12,500 ರೂಪಾಯಿಗಳನ್ನು ಜಮೆ ಮಾಡಲಾಗಿದೆ.

ಕಳೆದ ಪೆಬ್ರವರಿ 23 ರಂದು ಕೃಷ್ಣ ಧರ್ಮಸ್ಥಳ ಎಂಬಾತ ಆದಿವಾಸಿ ಯುವಕ ದಿನೇಶ್ ಗೆ ಹಲ್ಲೆಗೈದಿದ್ದು     ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ದಿನೇಶ್ ಪೆಬ್ರವರಿ 25 ರಂದು ಮೃತಪಟ್ಟಿದ್ದರು. ಇದೀಗ 11 ದಿನಗಳ ಬಳಿಕ ಜಿಲ್ಲಾಡಳಿತ ಪರಿಹಾರ ಧನವನ್ನು ಸಂತ್ರಸ್ತ ಕುಟುಂಬಕ್ಕೆ ಬಿಡುಗಡೆ ಮಾಡಿದೆ.

error: Content is protected !!