ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಕುರಾನ್ ನಲ್ಲಿ ಹಿಜಾಬ್ ಧರಿಸಬೇಕೆಂಬ ಉಲ್ಲೇಖವಿದೆ ಕಾನೂನಾತ್ಮಕವಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಪ್ರತಿಕ್ರಿಯೆ.

 

 

ಬೆಂಗಳೂರು : ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಯಾವ ಆಧಾರದಲ್ಲಿ ಈ ತೀರ್ಪು ಕೊಟ್ಟಿದ್ದಾರೆ ಅನ್ನೊದು ಗೊತ್ತಿಲ್ಲ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಹೇಳಿದ್ದಾರೆ.
ಹಿಜಾಬ್ ವಿಚಾರದಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದವು. ಇಂದಿನ ತೀರ್ಪಿನ ಕುರಿತಂತೆಯೂ ಧರ್ಮದ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಸುಪ್ರೀಂ ಮೊರೆ ಹೋಗಲು ಚಿಂತನೆ ನಡೆದಿದೆ. ಎಲ್ಲರೂ ಶಾಂತಿ, ಸೌಹಾರ್ದಯುತವಾಗಿ ವರ್ತಿಸುವಂತೆ ಕೋರಿಕೊಳ್ಳಲಾಗಿದೆ ಎಂದರು.ಕಾನೂನಾತ್ಮಕವಾಗಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ. ಹೈಕೋರ್ಟ್ ತೀರ್ಪು ಬಂದಿದ್ದು, ಮೂರು ಮಂದಿ ನ್ಯಾಯಾಧೀಶರ ಪೈಕಿ ಒಬ್ಬರು ಮುಸ್ಲಿಂ ನ್ಯಾಯಾದೀಶರೂ ಕೂಡ ಇದ್ದರು. ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಕುರಾನ್​ನಲ್ಲಿ ಹಿಜಾಬ್ ಕಡ್ಡಾಯ ಅಂತಾ ಹೇಳಿದೆ.

ಕುರಾನ್​ನ ಆದೇಶ ಕಡ್ಡಾಯವಲ್ಲ ಎಂದು ಹೇಳಿದ್ದು ಎಷ್ಟು ಸರಿ ಅಂತಾ ಪ್ರಶ್ನೆ ಮಾಡಿದ್ದಾರೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದು ಹೇಳಿದ್ದು ಸರಿಯಲ್ಲ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಹಿಜಾಬ್ ಮಹಿಳೆಯರಿಗೆ ಕಡ್ಡಾಯ ಅಂತಾ ಕುರಾನ್ ಸ್ಪಷ್ಟವಾಗಿ ತಿಳಿಸಿದೆ ಎಂದರು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಲು ತೀರ್ಮಾನ ಮಾಡಲಾಗಿದೆ. ನಮ್ಮ ವಕೀಲರು ಕುರಾನ್ ಆದೇಶವನ್ನು ಮಂಡಿಸಿದ್ದಾರೆ, ಕುರಾನ್​ನಲ್ಲಿ ಹಿಜಾಬ್ ಧರಿಸಬೇಕೆಂಬ ಉಲ್ಲೇಖವಿದೆ. ಕಳೆದ 10 ದಿನಗಳಿಂದ ಹಿಜಾಬ್ ಕುರಿತಂತೆ ಚರ್ಚೆಯೂ ನಡೆಸಿದ್ದೇವೆ ಎಂದು ತಿಳಿಸಿದರು.

error: Content is protected !!