ಬೆಳ್ತಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಅಜಿತ್ ಅರಿಗ, ಉಪಾಧ್ಯಕ್ಷರಾಗಿ ಗಣೇಶ್ ಭಂಡಾರಿ ಸವಣಾಲು ಅವಿರೋಧ ಆಯ್ಕೆ

 

 

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಬೆಳ್ತಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ  ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಇದರ 11 ಅಭ್ಯರ್ಥಿಗಳು ಜಯಗಳಿಸುವುದರೊಂದಿಗೆ ಮೊದಲ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಬೆಂಬಲಿತರು ಚುನಾಯಿತರಾಗಿದ್ದರು.

ಇಂದು ಮಾ.18ರಂದು ನಡೆದ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನದ ಚುನಾವಣೆ ಚುನಾವಣಾಧಿಕಾರಿ ಪುತ್ತೂರು ಸಹಕಾರ ಇಲಾಖೆಯ ಶಿವಲಿಂಗಯ್ಯ ಎಂ. ಇವರ ಉಪಸ್ಥಿತಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಆರಿಗ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಣೇಶ್ ಭಂಡಾರಿ ಸವಣಾಲು ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ನಿರ್ದೇಶಕರಾದ ನಾರಾಯಣ ಆಚಾರ್ಯ, ಶ್ರೀನಾಥ ಕೆ.ಎಂ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ , ಪ್ರೇಮ ಎಂ., ರಾಧ ನಾಯ್ಕ ಪುರಂದರ ಪೂಜಾರಿ, ಅಶೋಕ್ ರೈ, ತಿಮ್ಮಯ್ಯ ನಾಯ್ಕ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಸ್ಪರ್ಧಿಸಿ ಚುನಾಯಿತರಾಗಿದ್ದರು.  ಕಾಂಗ್ರೆಸ್ಸಿನಿಂದ   ಮುನಿರಾಜ ಅಜ್ರಿ ಮಾತ್ರ ಗೆಲುವು ಸಾಧಿಸಿ ನಿರ್ದೇಶಕ ರಾಗಿದ್ದಾರೆ.

error: Content is protected !!