ಗರ್ಡಾಡಿ: ಕೆ.ಎಸ್.ಆರ್.ಟಿ.ಸಿ. ಬಸ್, ದ್ವಿಚಕ್ರ ವಾಹನ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

 

 

 

 

ಬೆಳ್ತಂಗಡಿ: ಗರ್ಡಾಡಿ ಸಮೀಪದ‌ ನಂದಿಬೆಟ್ಟ ಬಳಿ ದ್ವಿಚಕ್ರ ವಾಹನಕ್ಕೆ ಕೆ.ಎಸ್. ಆರ್. ಟಿ. ಸಿ. ಬಸ್ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿಯಿಂದ ಮೂಡಬಿದ್ರೆ ಕಡೆಗೆ ಸಂಚಾರಿಸುತ್ತಿದ್ದ ಬಸ್ಸ್ ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ  ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ವಾಹನ ಸವಾರರು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿಯವರು  ಎಂಬ ಮಾಹಿತಿ ಲಭ್ಯವಾಗಿದೆ
ಗಾಯಗೊಂಡವರನ್ನು ತಕ್ಷಣ  ಸ್ಥಳೀಯರ ಸಹಕಾರದಲ್ಲಿ  ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ‌ಇನ್ನಷ್ಟೇ ಲಭಿಸಬೇಕಿದೆ.

error: Content is protected !!