ಧರ್ಮಸ್ಥಳದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್: ಎ.14ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್.2 ಚಿತ್ರದ ಹಿನ್ನೆಲೆ‌ ಮಂಜುನಾಥ ಸ್ವಾಮಿ ದರ್ಶನ:

 

 

ಬೆಳ್ತಂಗಡಿ: ಚಲನಚಿತ್ರ ರಾಕಿಂಗ್ ಸ್ಟಾರ್ ಯಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

 

 

ಇದೇ ಎ.14ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್.2 ಚಿತ್ರದ ಹಿನ್ನೆಲೆ‌ ಮಂಜುನಾಥ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ. ಯಶ್ ಜೊತೆ ಕೆ.ಜಿ.ಎಫ್.2 ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ಇದ್ದರು.
ಇತ್ತೀಚೆಗಷ್ಟೇ ಯಶ್ ಹಾಗೂ ಕೆ.ಜಿ.ಎಫ್.2 ಚಿತ್ರತಂಡ ದೇಶದ ಮುಂಬೈ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಿತ್ತು. ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು ದೇಗುಲಗಳಿಗೆ ಭೇಟಿ‌ ನೀಡಿದ್ದಾರೆ.

 

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೂ ರಾಕಿ ಭಾಯ್ ಭೇಟಿ: ಕೆ.ಜಿ.ಎಫ್.-2 ನಿರ್ಮಾಪಕ ವಿಜಯ್ ಕಿರಂಗದೂರು ಸಾಥ್

 

error: Content is protected !!