ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

 

 

 

ಹುಬ್ಬಳ್ಳಿ:ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಉಣಕಲ್​ ಕೆರೆ ಬಳಿ ಇರುವ ಖಾಸಗಿ ಹೋಟೆಲ್​ನ ರಿಸೆಷ್ಸನ್ ಬಳಿ ಗ್ರಾಹಕರ ಸೋಗಿನಲ್ಲಿ ಬಂದ್ದು  ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಡಹಗಲೇ ಖಾಸಗಿ ಹೋಟೆಲಿನಲ್ಲಿ ಚಂದ್ರಶೇಖರ್​ ಗುರೂಜಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಸ್ಥಳಕ್ಕೆ  ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

error: Content is protected !!