24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ಸಾಧ್ಯತೆ, ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್!: ಮುನ್ನೆಚ್ಚರಿಕೆ ವಹಿಸಲು ಡಿ.ಸಿ. ಸೂಚನೆ, ಸಮುದ್ರ ಮೀನುಗಾರಿಕೆಗೆ ನಿರ್ಬಂಧ: ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ

 

 

 

ಬೆಳ್ತಂಗಡಿ :ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತಿದ್ದು ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಇರುವುದರಿಂದ ನಾಳೆ ಜುಲೈ 7 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಕನ್ನಡ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ,ಪದವಿ ಪೂರ್ವ, ಸ್ನಾತಕೋತ್ತರ ಪದವಿ,ಡಿಪ್ಲೋಮಾ ಇಂಜಿನಿಯರಿಂಗ್,ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ ,ನದಿ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚಿಸಲಾಗಿದೆ.ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಆಯಾಯ ತಾಲೂಕಿನ ಕೇಂದ್ರ ಸ್ಥಾನದಲ್ಲಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೇ.ವಿ. ಆದೇಶ ನೀಡಿದ್ದಾರೆ.

error: Content is protected !!