ಮನೆ ಮೇಲೆ ಗುಡ್ಡ ಕುಸಿತ, ಮೂವರು ಕಾರ್ಮಿಕರ ಸಾವು: ಬಂಟ್ವಾಳ, ಪಂಜಿಕಲ್ಲು ಗ್ರಾಮದ ಮುಕ್ಕುಡ ಬಳಿ ಘಟನೆ

 

 

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಗುಡ್ಡ ಮನೆ ಮೇಲೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪಂಜಿಕಲ್ಲು ಗ್ರಾಮದ ನೇಲ್ಯಪಲ್ಕೆ ಸಮೀಪದ ಮುಕ್ಕುಡ ಎಂಬಲ್ಲಿ ಕಳೆದ ರಾತ್ರಿ ಭೂಕುಸಿತ ಉಂಟಾಗಿದೆ. ಮನೆಯೊಂದರ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದು ಕೇರಳ ಮೂಲದ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಕೊಟ್ಟಾಯಂನ ಬಾಬು, ಪಾಲಕ್ಕಾಡು ನಿವಾಸಿ ಬಿಜು (46), ಅಲಪ್ಪುರ ಸಂತೋಷ್ (46) ಸಾವಿಗೀಡಾದ ಕಾರ್ಮಿಕರು. ಕಣ್ಣೂರಿನ ಜಾನಿ ಬದುಕುಳಿದಿದ್ದು ಚಿಕಿತ್ಸೆ ನಡೆಯುತ್ತಿದೆ.

error: Content is protected !!