ನವ ಬೆಳ್ತಂಗಡಿ ನಿರ್ಮಾಣದ ಸಂಕಲ್ಪ ಸಕಾರ: ಶಾಸಕ ಹರೀಶ್ ಪೂಂಜ: ಉಜಿರೆ ಚತುಷ್ಪಥ ರಸ್ತೆಯ ಬೀದಿ ದೀಪ ಉದ್ಘಾಟನೆ

 

 

ಬೆಳ್ತಂಗಡಿ: ನವ ಬೆಳ್ತಂಗಡಿ ನಿರ್ಮಾಣದ ಸಂಕಲ್ಪ ಸಕಾರಗೊಳ್ಳುತಿದ್ದು ಕಳೆದ ನಾಲ್ಕು ವರ್ಷಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆದಿದ್ದು ಈ ಮೂಲಕ ಬೆಳ್ತಂಗಡಿ ತಾಲೂಕು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜುಲೈ 08 ಶುಕ್ರವಾರ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚತುಷ್ಪಥ ರಸ್ತೆಯ ಬೀದಿ ದೀಪ ಉದ್ಘಾಟಿಸಿ ಮಾತನಾಡಿದರು.

 

 


ಉಜಿರೆ ಗ್ರಾಮ ತಾಲೂಕಿನ ಕೇಂದ್ರ ಭಾಗವಾಗಿ ಮೂಡಿಬರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಜನೋಪಯೋಗಿ ಕೆಲಸಗಳ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ, ಗ್ರಾಮ ಪಂಚಾಯತ್ ಸದಸ್ಯರು, ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

error: Content is protected !!