ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಕೆಲಕಾಲ ತಡೆ: ಹೆದ್ದಾರಿ, ಅರಣ್ಯ ಇಲಾಖೆ ತುರ್ತು ಕಾರ್ಯಾಚರಣೆ, ಸಂಚಾರ ವ್ಯವಸ್ಥೆ:

 

 

 

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಭಾನುವಾರ ಬೆಳಗ್ಗೆ ಮರ ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಸುಮಾರು ಒಂದು ತಾಸು ಸಮಸ್ಯೆಯಾಯಿತು.
ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.ಭಾನುವಾರ ರಜಾ  ದಿನವಾಗಿದ್ದರಿಂದ ವಾಹನ ದಟ್ಟನೆ ಹೆಚ್ಚಾಗಿದ್ದು ಸವಾರರಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

error: Content is protected !!