ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ನಾಳೆಯಿಂದ ಶಾಲೆಗಳು‌ ಪ್ರಾರಂಭ:

 

 

ಬೆಳ್ತಂಗಡಿ: ಕಳೆದ ಒಂದು ವಾರಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಜುಲೈ 11 ಸೋಮವಾರದಿಂದ ಗಣನೀಯವಾಗಿ ಮಳೆ ಇಳಿಮುಖವಾಗಿದ್ದು ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಜುಲೈ 12 ಮಂಗಳವಾರದಿಂದ  ನಾಳೆಯಿಂದ ಕಾರ್ಯನಿರ್ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಾಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಪ್ರಕಟನೆಯಲ್ಲಿ ಸೂಚಿಸಿದ್ದಾರೆ.

error: Content is protected !!