ಭಾರೀ ಮಳೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ:ಟ್ರಾನ್ಸ್ ಫಾರ್ಮರ್ ಸಹಿತ ವಿದ್ಯುತ್ ಕಂಬಗಳಿಗೆ ಹಾನಿ: ತಕ್ಷಣ ಸ್ಪಂದಿಸಿ ಮರ ತೆರವು ಗೊಳಿಸಿದ ಲಾಯಿಲ ಗ್ರಾಮ ಪಂಚಾಯತ್:

 

 

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಹಾಗೂ ನಡ ಗ್ರಾಮದ ಗಡಿ ಪ್ರದೇಶದ ಅಗಳಿ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ತಡೆಯಾಗಿದ್ದಲ್ಲದೇ ಟ್ರಾನ್ಸ್ ಫಾರ್ಮರ್ ಸಹಿತ ಹಲವು  ವಿದ್ಯುತ್ ಕಂಬಗಳಿಗೆ ಹಾನಿ ಸಂಭವಿಸಿದೆ.

 

ಈ ಬಗ್ಗೆ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ, ಜಯಂತಿ ಅನ್ನಡ್ಕ ಸ್ಥಳಕ್ಕೆ ಭೇಟಿ ನೀಡಿದರು.

 

ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ದೊಡ್ಡ ಗಾತ್ರದ ಮರವಾದ್ದರಿಂದ ಯಂತ್ರದ ಮೂಲಕ ತೆರವುಗೊಳಿಸುವ ಬಗ್ಗೆ ತಿಳಿಸಿದ್ದು ತಕ್ಷಣ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ತೆರವಿಗೆ ಕ್ರಮ ಕೈಗೊಂಡು ಜೆಸಿಬಿಯ ಮೂಲಕ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

 

 

ಮರ ತೆರವು ಸಂದರ್ಭ ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಸ್ಥಳದಲ್ಲಿದ್ದರು.

 

ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಪರಿಶೀಲಿಸಿ ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿಗೆ ಕ್ರಮ ಕೈಗೊಂಡಿದ್ದಾರೆ. ಭಾರೀ ಮಳೆ ಬರುತಿದ್ದರೂ ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಗ್ರಾಮ ಪಂಚಾಯಿತಿ ಲಾಯಿಲ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ವಾರವಷ್ಟೇ  ಭಾರೀ ಮಳೆಗೆ ಇದೇ ರಸ್ತೆಯ ಕಿಂಡಾಜೆ ಬಳಿ ದೊಡ್ಡ ಮರವೊಂದು ರಸ್ತೆಗೆ  ಬಿದ್ದ ಪರಿಣಾಮ ರಸ್ತೆ ತಡೆ ಉಂಟಾಗಿ ವಿದ್ಯುತ್  ಕಂಬಗಳು ಉರುಳಿ ಬಿದ್ದು ಹಾನಿಯಾಗಿತ್ತು. ಈ ಸಂದರ್ಭದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ನೇತೃತ್ವದಲ್ಲಿ ಸ್ಥಳೀಯರ ಸಹಕಾರದಲ್ಲಿ ಅರಣ್ಯ ಇಲಾಖೆಯ ಮೂಲಕ  ತಕ್ಷಣ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಅದಲ್ಲದೇ ಮೆಸ್ಕಾಂ ಇಲಾಖೆ ಕೂಡ ಸ್ಪಂದಿಸಿ ತಕ್ಷಣ ದುರಸ್ತಿಗೊಳಿಸಿ ವಿದ್ಯುತ್ ಸಂಪರ್ಕವನ್ನು ನೀಡಿದ್ದರು

 

error: Content is protected !!