ಯುವ ಮೋರ್ಚಾ ಬೆಳ್ತಂಗಡಿ ಬಿಜೆಪಿ ಮಂಡಲ: ಹುತಾತ್ಮ ಯೋಧರ ಸ್ಮರಣೆ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ:

 

 

ಬೆಳ್ತಂಗಡಿ: ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ,ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೇಣದ ಬತ್ತಿ ಉರಿಸಿ ಹುತಾತ್ಮರಾದ ವೀರ ಯೋಧರಿಗೆ ಮೌನ ಪ್ರಾರ್ಥನೆಯ ಸಲ್ಲಿಸಿ ಕಾರ್ಗಿಲ್ ವಿಜಯ ದಿವಸ ವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸುನೀಲ್ ಶೆಣೈ ಮಾತನಾಡಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವ ಒಲವು ತೋರಿದರೆ ಇಂತಹ ಕಾರ್ಯಕ್ರಮಕ್ಕೆ ಹೆಚ್ಚಿನ ಅರ್ಥ ಬರಲು ಸಾಧ್ಯವಿದೆ. ಅಗ್ನಿಪಥ್ ಅಗ್ನಿ ವೀರ್ ಮೂಲಕ ಅಲ್ಪಾವಧಿಯಲ್ಲಿ ದೇಶ ಸೇವೆ ಮಾಡಲು ಉತ್ತಮ ಅವಕಾಶ ಎಂದರು. ಯುವಮೋರ್ಚಾ ಅಧ್ಯಕ್ಷ ಯಶವಂತ ಬೆಳಾಲು ಸ್ವಾಗತಿಸಿ ಪ್ರಸ್ತಾವಿಸಿದರು.ಹುತಾತ್ಮರಾದ ವೀರ ಸೈನಿಕರಿಗೆ ಮೇಣದ ಬತ್ತಿ ಬೆಳಗಿಸಿ ಮೌನ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು. ಭಾರತ ಮಾತೆಗೆ ಜಯಕಾರ ಹಾಕುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಲಾಯಿಲ ಉಪಾಧ್ಯಕ್ಷ ಗಣೇಶ್ ಆರ್ .ನ.ಪಂ ಸದಸ್ಯರುಗಳಾದ ಶರತ್, ಪ್ರಕಾಶ್, ಲೋಕೇಶ್,ಯುವ ಮೊರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮೇಲಂತಬೆಟ್ಟು ಗ್ರಾ.ಪಂ ಸದಸ್ಯ ಚಂದ್ರರಾಜ್ , ರಾಜು ಶೆಟ್ಟಿ ಬೆಂಗೆತ್ಯಾರ್, ವಕೀಲ  ವಸಂತ ಮರಕ್ಕಡ, ರಕ್ಷಿತ್ ಶೆಟ್ಟಿ ಪಣೆಕ್ಕರ ಪ್ರಶಾಂತ್ ಚಾರ್ಮಾಡಿ, ಉದ್ಯಮಿ ರಾಜೇಶ್ ಪ್ರಭು, ಹರೀಶ್ ಕಲ್ಲಗುಡ್ಡೆ,ಕಿರಣ್ ಶೆಟ್ಟಿ, ಜಗದೀಶ್ ಕನ್ನಾಜೆ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಕೊನೆಯಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಅರವಿಂದ ಧನ್ಯವಾದವಿತ್ತರು.

error: Content is protected !!