ಸುರತ್ಕಲ್ ಫಾಝೀಲ್ ಹತ್ಯೆ ಪ್ರಕರಣ: ಮಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಙೆ

 

 

 

ಮಂಗಳೂರು: ಸುರತ್ಕಲ್ ನಲ್ಲಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುರತ್ಕಲ್ ಸುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್​ ತಿಳಿಸಿದ್ದಾರೆ.

ಸುರತ್ಕಲ್​​ನಲ್ಲಿ ಫಾಜಿಲ್​​ನನ್ನು ಹತ್ಯೆ ಮಾಡಿದ ಘಟನಾಸ್ಥಳ ಪರಿಶೀಲಿಸಿ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು. 144 ಸೆಕ್ಷನ್ ಇರುವುದರಿಂದ 5 ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ ಎಂದು ಮಾಹಿತಿ ನೀಡಿದರು.ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ: ಮಂಗಳೂರಿನ 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯಾವ ಕಾರಣಕ್ಕಾಗಿ ಈ ಹತ್ಯೆ ನಡೆದಿದೆ ಎಂಬುದನ್ನು ತ್ವರಿತವಾಗಿ ಪತ್ತೆ ಹಚ್ಚುತ್ತೇವೆ. ಘಟನೆ ಹಿನ್ನೆಲೆ ಪಾರದರ್ಶಕವಾಗಿ,ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಯಾರೂ ಕಾನೂನು ಕೈಗೆತ್ತಿಕೊಳ್ಳದೇ ಶಾಂತಿ ಕಾಪಾಡಬೇಕು ಎಂದು ಸೂಚಿಸಿದರು.

error: Content is protected !!