ದ.ಕ. ಜಿಲ್ಲೆಯಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ, ಮುಂಗಟ್ಟುಗಳು ಬಂದ್: ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

 

 

ಮಂಗಳೂರು: ಸರಣಿ ಹತ್ಯೆಗಳ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ ಕ್ರಮ ಕೈಗೊಳ್ಳಲಾಗಿದ್ದು 144 ಸೆಕ್ಷನ್ ಜಾರಿಯಲ್ಲಿದೆ ಅದಲ್ಲದೆ ಅಗಸ್ಟ್ 1 ರವರೆಗೆ ಜಿಲ್ಲೆಯಾದ್ಯಂತ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಎಂದಿನಂತೆ ವಹಿವಾಟು ನಡೆಯಲಿದೆ. ಆಸ್ಪತ್ರೆಗಳು, ಮೆಡಿಕಲ್ ಹಾಗೂ ಇತರ ಅತ್ಯಾವಶ್ಯಕ ಸೇವೆಗಳು ಎಂದಿನಂತೆ ಲಭ್ಯವಿರಲಿವೆ. ಇವುಗಳು ಬಂದ್ ವ್ಯಾಪ್ತಿಗೆ ಒಳಪಡುವುದಿಲ್ಲ.

error: Content is protected !!