ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ. ಶಾಫಿ ಬೆಳ್ಳಾರೆ ಸಹಿತ ಮೂವರು ಎನ್ಐಎ ವಶಕ್ಕೆ:

 

 

 

 

ಪುತ್ತೂರು: ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಿಗ್ಗೆ ಮೂವರನ್ನು ಎನ್ಐಎ(ರಾಷ್ಟ್ರೀಯ ತನಿಖಾ ದಳ) ವಶಕ್ಕೆ ಪಡೆದಿದೆ.

ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯದ ಇಬ್ರಾಹಿಂ ಶಾ ಅವರ ಬೆಳ್ಳಾರೆಯ ಮನೆ ಮೇಲೆ ಇಂದು ಬೆಳಗಿನ ಜಾವ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ಇದರಲ್ಲಿ ಇಕ್ಬಾಲ್ ಬೆಳ್ಳಾರೆ ಎಂಬಾತ ಬೆಳ್ಳಾರೆ ಗ್ರಾ.ಪಂ ಸದಸ್ಯರಾಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಹಾಗೆಯೇ ಸುಳ್ಯ, ಉಪ್ಪಿನಂಗಡಿ, ಮೈಸೂರು, ಹುಬ್ಬಳ್ಳಿ ಕಡೆಗಳಲ್ಲಿ ಎನ್ಐಎ ತಂಡ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಎನ್ಐಎ ತಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಾಪತ್ತೆಯಾದ ನಾಲ್ಕು ಜನ ಆರೋಪಿಗಳ ಬಂಧನಕ್ಕೆ ಸಹಕರಿಸುವವರಿಗೆ ಬಹುಮಾನವನ್ನು ಘೋಷಣೆ ಮಾಡಿದೆ.

error: Content is protected !!