ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ನಿಧನ

ಬೆಳ್ತಂಗಡಿ: ಕಣಿಯೂರು ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಎಪಿಎಂಸಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ಇಂದು ನಿಧನ ಹೊಂದಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಡಯಲಿಸೀಸ್ ಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಬಂದಿದ್ದ ವೇಳೆ ಅಸ್ವಸ್ಥಗೊಂಡು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ವಿಷಯ ತಿಳಿದು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಬೆಳ್ತಂಗಡಿ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ‌ ಪಡೆದಿದ್ದಾರೆ.

error: Content is protected !!