ಮದ್ದಡ್ಕ ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ: ಮೂವರನ್ನು ವಶಕ್ಕೆ ಪಡೆದ ಪೊಲೀಸರು: ಬಜರಂಗದಳ ಕಾರ್ಯಕರ್ತರಿಂದ ಮಾಹಿತಿ:

 

 

 

 

ಬೆಳ್ತಂಗಡಿ:ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ 20 ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗ ದಳ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಈ ಬಗ್ಗೆ ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ.

 

 

 

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳಾದ ಹಮೀದ್ , ಇಸ್ಮಾಯಿಲ್, ಮತ್ತು ಹಾರಿಸ್ ಎಂಬ ಮೂವರನ್ನು ವಶಕ್ಕೆ ಪಡೆದು ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

error: Content is protected !!